ಚಲಿಸುತ್ತಿದ್ದ ಬಸ್ಸಿನಿಂದ ಕಳಚಿದ ಟಯರ್‌: ಪ್ರಾಣಪಾಯದಿಂದ ಪಾರಾದ ಪ್ರಯಾಣಿಕರು, ದೃಶ್ಯ ಸಿಸಿಟಿವಿಯಲ್ಲಿ ಸೆರೆ.

ಚಿಕ್ಕಮಗಳೂರು: ಬಸ್ಸೊಂದು ಚಲಿಸುತ್ತಿದ್ದ ಹಾಗೇ ಬಸ್ಸಿನ ಟಯರ್‌ ಏಕಾಏಕಿ ಕಳಚಿ ಬಿದ್ದ ಘಟನೆ ಎನ್‌ಆರ್‌ ಪುರ ತಾಲೂಕಿನ ಬಾಳೆಹೊನ್ನೂರು ಪಟ್ಟಣದ ರೋಟರಿ ಸರ್ಕಲ್‌ನಲ್ಲಿ ನಡೆದಿದೆ.

ಚಲಿಸುತ್ತಿರುವಾಗಲೇ ಬಸ್ಸಿನ ಟಯರ್‌ ಕಳಚಿ ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅದೃಷ್ಟವಶಾತ್‌ ಯಾವುದೇ ಅಪಾಯವಾಗದೆ ಪ್ರಯಾಣಿಕರು ಪಾರಾಗಿದ್ದಾರೆ.

ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಸುಗಮ ಬಸ್ಸು ಸರ್ಕಲ್‌ ಬಳಿ ತಲುಪುವಾಗ ಈ ದುರಂತ ಸಂಭವಿಸಿದೆ. ಸರ್ಕಲ್‌ ಬಳಿ ಚಾಲಕ ಬಸ್ಸನ್ನು ನಿಧಾನಗತಿಯಲ್ಲಿ ಚಲಿಸುತ್ತಿದ್ದುದರಿಂದ ದೊಡ್ಡ ಅಪಾಯವೊಂದು ತಪ್ಪಿದೆ ಎನ್ನಲಾಗಿದೆ.