ಪಡುಬಿದ್ರಿ: ಮಹಿಳೆಯ ನೈಟಿಗೆ ಆಕಸ್ಮಿಕ ಬೆಂಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು.

ಉಡುಪಿ: ತಾಲೂಕಿನ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಂಕಿ ಆಕಸ್ಮಿಕದಿಂದ ಗಾಯಗೊಂಡಿದ್ದ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಹೆಜಮಾಡಿ ಗ್ರಾಮದ ಸುನಂದ(42) ಎಂದು ಗುರುತಿಸಲಾಗಿದೆ.

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಇವರು, ನ.10ರಂದು ಬೆಂಕಿ ಕಡ್ಡಿ ಗೀರಿದಾಗ ನೈಟಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿತ್ತೆನ್ನಲಾಗಿದೆ. ಇದರಿಂದ ಅವರ ಕಾಲಿನಿಂದ ಕುತ್ತಿಗೆಯವರೆಗೆ ಸುಟ್ಟಗಾಯಗಳು ಆಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರು, ಡಿ.5ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.