ಹಿರಿಯ ಬಿಜೆಪಿ ಮುಖಂಡ ಸೋಮಶೇಖರ್ ಭಟ್ ನಿಧನ

ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಕಟ್ಟಾಳು, ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರೂ ಆಗಿದ್ದ ಭಾರತೀಯ ಜನತಾ ಪಾರ್ಟಿಯ ಹಿರಿಯ ಮುತ್ಸದ್ಧಿ ಶ್ರೀ ಎಂ. ಸೋಮ ಶೇಖರ್ ಭಟ್ ರವರು ಇಂದು ನಿಧನ ಹೊಂದಿದ್ದಾರೆ.

ರಾಷ್ಟ್ರೀಯವಾದಿ ಚಿಂತನೆಯನ್ನು ಬದುಕಿನುದ್ದಕ್ಕೂ ಪಾಲಿಸಿಕೊಂಡು, ಸಾವಿರಾರು ಕಾರ್ಯಕರ್ತರಿಗೆ ಆದರ್ಶಪ್ರಾಯರಾಗಿದ್ದ “ಸೋಮಣ್ಣ”ನವರ ವ್ಯಕ್ತಿತ್ವ ಎಲ್ಲರಿಗೂ ಸದಾ ಪ್ರೇರಣೆ ಆಗಿದೆ.